Posts

Showing posts from November, 2025

ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ

Image
ಸಮಸ್ತ ಕೇರಳ ಸುನ್ನಿ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದಿರುವ ಮದರಸಾಗಳಲ್ಲಿ 3 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಹೆಚ್ಚುವರಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು, ಮದ್ರಸಾ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಮಸ್ತ ಕೇರಳ ಸುನ್ನಿ ಶಿಕ್ಷಣ ಮಂಡಳಿಯು ನಡೆಸುವ ಎರಡನೇ ಹಂತದ ಸ್ಮಾರ್ಟ್ ಸ್ಕಾಲರ್‌ಶಿಪ್ ಪರೀಕ್ಷೆಯ ಮುಖ್ಯ ಪರೀಕ್ಷೆಯು ನ.29 ರ ಶನಿವಾರ ಭಾರತೀಯ ಕಾಲಮಾನ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ, ಸೌದಿ ಅರೇಬಿಯಾ, ಬಹ್ರೇನ್, ಕತಾರ್, ಯುಎಇ, ಓಮನ್ ಮತ್ತು ಕುವೈತ್‌ನಲ್ಲಿ 3200 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಒಂದು ಲಕ್ಷದ ಎರಡು ಸಾವಿರದ ಐನೂರು ಆಯ್ದ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಿದರು. ಪರೀಕ್ಷೆಯು ಸಂಪೂರ್ಣವಾಗಿ OMR ತಂತ್ರಜ್ಞಾನವನ್ನು ಬಳಸಿಕೊಂಡು ನಾಗರಿಕ ಸೇವೆಗಳ ಪರೀಕ್ಷೆಯ ಮಾದರಿಯಲ್ಲಿ ರಚನೆಯಾಗಿದೆ. ಒಬ್ಬ ಮುಖ್ಯ ಪರೀಕ್ಷಕರು ಮತ್ತು 30 ವಿದ್ಯಾರ್ಥಿಗಳಿಗೆ ಒಬ್ಬ ಪರಿವೀಕ್ಷಕರು ಸಹಿತ ವಿಶೇಷ ತರಬೇತಿ ಪಡೆದ 6500 ಶಿಕ್ಷಕರು ಮುಖ್ಯ ಪರೀಕ್ಷೆಯನ್ನು ನಡೆಸಿದರು. ಎಸ್ ಜೆ ಎಂ ರಾಜ್ಯ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಪ್ರಧಾನ ಕಾರ್ಯದರ್ಶಿ ಪಿ ಎಂ ಮದನಿ ಸಹಿತವಿರುವ 200 ಕ್ಕೂ ಮಿಕ್ಕ ಸೂ...

ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ, ಉಳ್ಳಾಲ, ಮಂಗಳೂರು ಮತ್ತು ಕಾಟಿಪಳ್ಳ ಡಿವಿಷನ್ ಕಾರ್ಯಾಗಾರ

Image
ಸಮಸ್ತ ಕೇರಳ ಸುನ್ನಿ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದಿರುವ ಮದರಸಾಗಳಲ್ಲಿ 3 ರಿಂದ +2 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಹೆಚ್ಚುವರಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು, ಮದ್ರಸಾ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಮಸ್ತ ಕೇರಳ ಸುನ್ನಿ ಶಿಕ್ಷಣ ಮಂಡಳಿಯು ನಡೆಸುವ ಎರಡನೇ ಹಂತದ ಸ್ಮಾರ್ಟ್ ಸ್ಕಾಲರ್‌ಶಿಪ್ ಪರೀಕ್ಷೆಯ ಮುಖ್ಯ ಪರೀಕ್ಷೆಯು ನ.29 ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ನಡೆಯಲಿದೆ. ಕೇರಳ, ತಮಿಳುನಾಡು, ಕರ್ನಾಟಕ, ಲಕ್ಷದ್ವೀಪ, ಸೌದಿ ಅರೇಬಿಯಾ, ಬಹ್ರೇನ್, ಕತಾರ್, ಯುಎಇ, ಓಮನ್ ಮತ್ತು ಕುವೈತ್‌ನಲ್ಲಿ 3200 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಒಂದು ಲಕ್ಷದ ಎರಡು ಸಾವಿರದ ಐನೂರು ಆಯ್ದ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷೆಯು ಸಂಪೂರ್ಣವಾಗಿ OMR ತಂತ್ರಜ್ಞಾನವನ್ನು ಬಳಸಿಕೊಂಡು ನಾಗರಿಕ ಸೇವೆಗಳ ಪರೀಕ್ಷೆಯ ಮಾದರಿಯಲ್ಲಿ ರಚನೆಯಾಗಿದೆ. ಒಬ್ಬ ಮುಖ್ಯ ಪರೀಕ್ಷಕರು ಮತ್ತು 30 ವಿದ್ಯಾರ್ಥಿಗಳಿಗೆ ಒಬ್ಬ ಪರಿವೀಕ್ಷಕರು ಸೇರಿದಂತೆ ವಿಶೇಷ ತರಬೇತಿ ಪಡೆದ 6500 ಶಿಕ್ಷಕರು ಮುಖ್ಯ ಪರೀಕ್ಷೆಯನ್ನು ನಡೆಸುತ್ತಾರೆ ಎಂದು ಕರ್ನಾಟಕ ರಾಜ್ಯ ಎಸ್ ಜೆ ಎಂ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ತಿಳಿಸಿದರು. ಅವರು ಉಳ್ಳಾಲ, ಮಂಗಳೂರು, ...

"ಮುಅಲ್ಲಿಮರ ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜದ ಉನ್ನತಿ" ಉಜಿರೆ ತಂಙಳ್ ಪ್ರಸ್ತಾಪ. ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್'ಜಾನ್ 2025 ಸಮಾಪ್ತಿ. ಚಾಂಪಿಯನ್ಸ್ ಟ್ರೋಫಿ ತನ್ನದಾಗಿಸಿದ ದ.ಕ ಸೌತ್ ಜಿಲ್ಲೆ

Image
ಚಿಕ್ಕಮಗಳೂರು : ಮುಸ್ಲಿಂ ಸಮಾಜದ ಪರಮೋನ್ನತ ಏಳಿಗೆಯಲ್ಲಿ ಮುಅಲ್ಲಿಮರ ಸೇವೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ ಎಂದು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಮದನಿ ಉಜಿರೆ ತಂಙಳ್ ರವರು ತಿಳಿಸಿದರು. ಅವರು ಮದ್ರಸಾ ಅಧ್ಯಾಪಕರ ಒಕ್ಕೂಟ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ.ಎಂ ವತಿಯಿಂದ ಚಿಕ್ಕಮಗಳೂರಿನ ಉಪ್ಪಳ್ಳಿಯ ಶಾದುಲಿ ಜುಮಾ ಮಸ್ಜಿದ್ ವಠಾರದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್'ಜಾನ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಸ್.ಜೆ.ಎಂ ರಾಜ್ಯಾಧ್ಯಕ್ಷ ಅಬ್ದುಲ್ ರಹಿಮಾನ್ ಮದನಿ ಜೆಪ್ಪು ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಕ್ರಿಯವಾಗಿ ಬೋಧನಾ ರಂಗಕ್ಕಿಳಿದಿರುವ ಮದ್ರಸಾ ಅಧ್ಯಾಪಕರಲ್ಲಿ ನಾಯಕತ್ವ ಗುಣವನ್ನು ಇನ್ನಷ್ಟು ಪೋಷಿಸಲು ಮುಅಲ್ಲಿಂ ಮೆಹರ್ಜಾನ್ ಅತ್ಯಂತ ಸಹಕಾರಿಯಾಗಿದೆ ಎಂದು ತಿಳಿಸಿದರು. ಮೂರು ಪ್ರಮುಖ ವೇದಿಕೆಗಳಲ್ಲಿ ಸುಮಾರು 40 ರಷ್ಟು ವೈವಿಧ್ಯಮಯ ಸ್ಪರ್ಧೆಗಳೊಂದಿಗೆ 300 ರಷ್ಟು ಮುಅಲ್ಲಿಮರು ಸ್ಪರ್ಧೆಯಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ರಾಜ್ಯ ಪ್ರೋಗ್ರಾಮ್ ಸಮಿತಿ ಚೇರ್‌ಮಾನ್ ಹಾಫಿಳ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಪ್ರಾಸ್ತಾವಿಕ ಭಾಷಣ ನಡೆಸಿದರು. ಯೂಸುಫ್ ಮದನಿ ಬೇಲೂರು, ಕೆ.ಎಂ.ಜೆ ಜಿಲ್ಲಾಧ್ಯಕ್ಷ ಅಹ್ಮದ್ ಝಮೀರ್ ಬಾಳೆಹೊನ್ನೂರು, ಎಸ್.ಎಂ.ಎ ಜಿಲ್ಲಾಧ್ಯಕ್ಷ್ಯ ಅಬೂಬಕರ್ ಸಿದ್ದೀಖ್ ಸಂಗೀನ್, ಹಾಗ...

"ಮುಅಲ್ಲಿಮರ ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜದ ಉನ್ನತಿ" ಉಜಿರೆ ತಂಙಳ್. ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್'ಜಾ‌ನ್ಗೆ‌ ಅದ್ದೂರಿಯ ಚಾಲನೆ

Image
ಚಿಕ್ಕಮಗಳೂರು : ಮುಸ್ಲಿಂ ಸಮಾಜದ ಪರಮೋನ್ನತ ಏಳಿಗೆಯಲ್ಲಿ ಮುಅಲ್ಲಿಮರ ಸೇವೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ ಎಂದು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಮದನಿ ಉಜಿರೆ ತಂಙಳ್ ರವರು ತಿಳಿಸಿದರು. ಅವರು ಮದ್ರಸಾ ಅಧ್ಯಾಪಕರ ಒಕ್ಕೂಟ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ.ಎಂ ವತಿಯಿಂದ ಚಿಕ್ಕಮಗಳೂರಿನ ಉಪ್ಪಳ್ಳಿಯ ಶಾದುಲಿ ಜುಮಾ ಮಸ್ಜಿದ್ ವಠಾರದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್'ಜಾನ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಸ್.ಜೆ.ಎಂ ರಾಜ್ಯಾಧ್ಯಕ್ಷ ಅಬ್ದುಲ್ ರಹಿಮಾನ್ ಮದನಿ ಜೆಪ್ಪು ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಕ್ರಿಯವಾಗಿ ಬೋಧನಾ ರಂಗಕ್ಕಿಳಿದಿರುವ ಮದ್ರಸಾ ಅಧ್ಯಾಪಕರಲ್ಲಿ ನಾಯಕತ್ವ ಗುಣವನ್ನು ಇನ್ನಷ್ಟು ಪೋಷಿಸಲು ಮುಅಲ್ಲಿಂ ಮೆಹರ್ಜಾನ್ ಅತ್ಯಂತ ಸಹಕಾರಿಯಾಗಿದೆ ಎಂದು ತಿಳಿಸಿದರು. ಮೂರು ಪ್ರಮುಖ ವೇದಿಕೆಗಳಲ್ಲಾಗಿ ಸುಮಾರು 40 ರಷ್ಟು ವೈವಿಧ್ಯಮಯ ಸ್ಪರ್ಧೆಗಳೊಂದಿಗೆ 300 ರಷ್ಟು ಮುಅಲ್ಲಿಮರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ವೇದಿಕೆಯಾಗಿ ಮುಅಲ್ಲಿಂ ಮೆಹರ್ಜಾನ್ ಹಮ್ಮಿಕೊಳ್ಳಲಾಗಿದೆ. ಒಂದನೇ ವೇದಿಕೆಗೆ ಮರ್ಹೂಂ ಕಟ್ಟಿಪಾರ ಉಸ್ತಾದ್ ಹೆಸರು  ಎರಡು ಮತ್ತು ಮೂರನೇ ವೇದಿಕೆಗೆ  ಕೆ.ಪಿ ಮಹಮ್ಮದ್  ಮುಸ್ಲಿಯಾರ್   ಹಾಗೂ ಕೆ.ಪಿ ಸುಲೈಮಾನ್ ಹಾಜಿ  ರ...

ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ SJM ಉಳ್ಳಾಲ ರೇಂಜ್ ಆಶ್ರಯದಲ್ಲಿ ರೇಂಜ್ ಕಾಂಫರೆನ್ಸ್

Image
ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ SJM ಉಳ್ಳಾಲ ರೇಂಜ್ ಆಶ್ರಯದಲ್ಲಿ ರೇಂಜ್ ಕಾಂಫರೆನ್ಸ್ ಕಲ್ಲಾಪು ಸೇವಂತಿಗುಡ್ಡೆಯ ವಿಖಾಯತುಲ್ ಇಸ್ಲಾಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಸಭೆಯ ಒಂದನೇ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮುಕ್ಕಚೇರಿ ಮದ್ರಸದ ಮುಅಲ್ಲಿಂ ಶರೀಫ್ ಬಾಖವಿ ದುಆ ನೆರವೇರಿಸಿದರು. ತೋಟ ಮದ್ರಸ ಮುಅಲ್ಲಿಮರಾದ ಮುಸ್ತಫ ಸಅದಿ ಖಿರಾಅತ್ ಪಠಿಸಿ, ಸಭೆಗೆ ಚಾಲನೆ ನೀಡಿದರು. ಸೇವಂತಿಗುಡ್ಡೆ ಮಸೀದಿಯ ಇಮಾಮರಾದ ಅಬ್ದುಲ್ ಹಕೀಂ ಮದನಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಎರಡನೇ ವೀಡಿಯೋ ನೋಡಲು ನನ್ನನ್ನು ಮುಟ್ಟಿ ರೇಂಜ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ವರದಿಯನ್ನು ಮತ್ತು ಕೋಶಾಧಿಕಾರಿ ವಿ ಎ ಮುಹಮ್ಮದ್ ಸಖಾಫಿ ಲೆಕ್ಕಪತ್ರವನ್ನು ಮಂಡಿಸಿದರು. ಸಭೆಯ ಮೂರನೇ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಸೇವಂತಿಗುಡ್ಡೆ ಜಮಾಅತ್ ಅಧ್ಯಕ್ಷರಾದ ಶಮೀರ್ ಸೇವಂತಿಗುಡ್ಡೆ ಮತ್ತು ಮದ್ರಸ ಸಂಚಾಲಕ ಜಾಬಿರ್ ಕಲ್ಲಾಪು ಶುಭ ಹಾರೈಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ತೌಸೀಫ್ ಸೇವಂತಿಗುಡ್ಡೆ, ಸದಸ್ಯರಾದ ಮುಹಮ್ಮದ್, ಫಾರೂಖ್ ಮತ್ತು ಹಿರಿಯ ವ್ಯಕ್ತಿ ಅಬೂಬಕರ್ ಜೆಪ್ಪು ಮತ್ತು ಅರ್ಶದ್, ಆಸಿಫ್ ಕೆರೆಬೈಲು, ನಿಸಾರ್, ಖಲೀಲ್ ಮೇಲಗುಡ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಭೆಯ ನಾಲ್ಕನೇ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಸಭೆಯ ಪ್ರಾರಂಭ...

ಎಸ್‌ಜೆಎಂ ದ.ಕ ಜಿಲ್ಲಾ ವೆಸ್ಟ್ : ಮುಅಲ್ಲಿಮ್ ಮೆಹರ್ಜಾನ್ 2025 ಯಶಸ್ವಿ ಸಮಾಪ್ತಿ

Image
ಉಳ್ಳಾಲ : ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ಆಫ್ ಇಂಡಿಯಾ ಅಂಗೀಕೃತ ಮದ್ರಸಗಳ ಅಧ್ಯಾಪಕರಲ್ಲಿ ಅಡಗಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಾಯೋಜಿತ ಮುಅಲ್ಲಿಮ್ ಮೆಹರ್ಜಾನ್ 2025 ಇದರ ಎಸ್ ಜೆ ಎಂ ದ ಕ ಜಿಲ್ಲಾ ವೆಸ್ಟ್ ಜಿಲ್ಲಾ ಮಟ್ಟದ ಮುಅಲ್ಲಿಂ ಮೆಹರ್ಜಾನ್ ಸ್ಪರ್ಧಾ ಸಮಾರಂಭ ತಲಪಾಡಿ ದಾರುಸ್ಸಲಾಂ ಮದ್ರಸ ಸಭಾಂಗಣದಲ್ಲಿ ನಡೆಯಿತು. ಬಿಲಾಲ್ ಜುಮಾ ಮಸ್ಜಿದ್ ತಲಪಾಡಿ ಜಮಾಅತ್ ಅಧ್ಯಕ್ಷರಾದ ಯಾಕೂಬ್ ಪೂಮಣ್ಣು ರವರು ಧ್ವಜಾರೋಹಣಗೈದರು. ಮುಅಲ್ಲಿಂ ಮೆಹರ್ಜಾನ್ ಉದ್ಘಾಟನಾ ಸಮಾರಂಭವು ವೆಸ್ಟ್ ಜಿಲ್ಲಾಧ್ಯಕ್ಷರಾದ ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ತಲಪಾಡಿ ಬಿಲಾಲ್ ಜುಮಾ ಮಸ್ಜಿದ್ ಮುದರ್ರಿಸ್ ಹಾಫಿಝ್ ಅಹ್ಮದ್ ನಝೀರ್ ಸಖಾಫಿ ದುಆ ನೆರವೇರಿಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ರಾಜ್ಯ ಜೊತೆ ಕಾರ್ಯದರ್ಶಿ ಡಾ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ವೆಸ್ಟ್ ಜಿಲ್ಲಾ ಮುಅಲ್ಲಿಂ ಮೆಹರ್ಜಾನ್ ನಿರ್ವಹಣಾ ಸಮಿತಿ ಚೇರಮಾನ್ ಅಬ್ದುಲ್ ಮಜೀದ್ ಸಖಾಫಿ ಮೆಲ್ಕಾರ್ ಸ್ವಾಗತಿಸಿದರು. ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸಖಾಫಿ ಸುರತ್ಕಲ್ ಧನ್ಯವಾದಗೈದರು. ಎಸ್ ಜೆ ಎಂ ದ.ಕ ವೆಸ್ಟ್ ಜಿಲ್ಲೆಯ ಅಧೀನ 1...